ಸ್ವಾಮಿ ವಿವೇಕಾನಂದ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷ ಭಾಸ್ಕರ್ ಎಸ್ ಅವರ 50 ನೇ ವರ್ಷದ ಹುಟ್ಟು ಹಬ್ಬ ಆಚರಣೆ..

varthajala
0

ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಂದಿನಿ ಲೇಔಟ್ ವಾರ್ಡ್ ನಲ್ಲಿರುವ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷರಾದ ಭಾಸ್ಕರ್ ಎಸ್ ಅವರ 50 ನೇ ವರ್ಷದ ಹುಟ್ಟು ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು. ಈ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಸ್ಥಳೀಯ ಪಾಲಿಕೆ ಮಾಜಿ ಸದಸ್ಯರಾದ ಕೆ ವಿ ರಾಜೇಂದ್ರ ಕುಮಾರ್ ಹಾಗೂ ಪುಷ್ಪಾ ರಾಜೇಂದ್ರಕುಮಾರ್ ಪಾಲ್ಗೊಂಡು ಭಾಸ್ಕರ್ ಅವರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ರಾಜೇಂದ್ರಕುಮಾರ್ ಭಾಸ್ಕರ್ ಅವರು ಭಾರತೀಯ ಜನತಾ ಪಾರ್ಟಿ ಯ ಸಕ್ರಿಯ ಕಾರ್ಯಕರ್ತರಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಸ್ವಾಮಿ ವಿವೇಕಾನಂದ ಮೆಮೋರಿಯಲ್ ಟ್ರಸ್ಟ್ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸಿ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇವರಿಗೆ ದೇವರು ಆಯುರಾರೋಗ್ಯ ಸಂತೋಷ್ ಕೊಟ್ಟು ಕಾಪಾಡಲಿ , ಹಾಗೆಯೇ ರಾಜಕೀಯವಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ಒಳ್ಳೆಯ ಸ್ಥಾನಮಾನಗಳು ಸಿಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಕೆ ವಿ ರಾಜೇಂದ್ರ ಕುಮಾರ್, ಪುಷ್ಪಾ ರಾಜೇಂದ್ರಕುಮಾರ್,  ಸ್ಥಳೀಯ ಮುಖಂಡರುಗಳಾದ ನಾರಾಯಣಸ್ವಾಮಿ,  ಸುರಭಿ ನಾಗರಾಜ್, ಲೋಕೇಶ್, ವಿನೋದ್, ಹನುಮಂತು, ನಾಗರಾಜ್, ಮಾದೇಶ್, ಹೆಂಜರಪ್ಪ, ಸೆಲ್ವಿ ಭಾಸ್ಕರ್, ರೂಪಾ,ವಿಜಯಲಕ್ಷ್ಮಿ, ಸೇರಿದಂತೆ ಕುಟುಂಬ ಸದಸ್ಯರು ಹಾಗೂ ವಿವೇಕಾನಂದ ಮೆಮೋರಿಯಲ್ ಟ್ರಸ್ಟ್ ನ ಎಲ್ಲ ಸದಸ್ಯರು ಪಾಲ್ಗೊಂಡು ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಿದರು. 

Post a Comment

0Comments

Post a Comment (0)