ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೂನ್ 14 ರಂದು ವಾಕಥಾನ್

varthajala
0

 ಬೆಂಗಳೂರು (ಕರ್ನಾಟಕ ವಾರ್ತೆ): ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ರಕ್ತ ಪರಿಚಲನಾ ಪರಿಷತ್, ಕರ್ನಾಟಕ ರಾಜ್ಯ ರಕ್ತ ಚಾಲನಾ ಪರಿಷತ್ ಹಾಗೂ ಲಯನ್ಸ್ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಸ್ವಾಮಿ ವಿವೇಕಾನಂದ ರಕ್ತಕೇಂದ್ರ ಮತ್ತು ಬೆಳಗಾವಿ ರಕ್ತಕೇಂದ್ರಗಳ ಸಹಯೋಗದೊಂದಿಗೆ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಕಬ್ಬನ್ ಉದ್ಯಾನವನದಿಂದ ಕಂಠೀರವ ಕ್ರೀಡಾಂಗಣದವೆರೆಗೆ ವಾಕಥಾನ್ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಹಿಸಲಿದ್ದು, ವಾಕಥಾನ್ ಮುಖಾಂತರ ರಕ್ತದಾನಿಗಳಿಗೆ ಗೌರವವನ್ನು ಸಲ್ಲಿಸುವುದರ ಮೂಲಕ ರಕ್ತದಾನದ ಬಗ್ಗೆ ಜಾಗೃತಿ ಹಾಗೂ ರಕ್ತದಾನ ಮಾಡುವಂತೆ ಪ್ರೇರೇಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಕ್ತ ಚಾಲನಾ ಪರಿಷತ್‍ನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)