ಜೂನ್ 19 ರಂದು ಡಾ.ಬಿ.ಆರ್. ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ ಪ್ರಥಮ ವಾರ್ಷಿಕ ಘಟಿಕೋತ್ಸವ

varthajala
0

 ಬೆಂಗಳೂರು, ಜೂನ್ 01 (ಕರ್ನಾಟಕ ವಾರ್ತೆ): ಡಾ. ಬಿ. ಆರ್. ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ ಪ್ರಥಮ ವಾರ್ಷಿಕ ಘಟಿಕೋತ್ಸವವು, ಜೂನ್ 19 ರಂದು ಬೆಳಗ್ಗೆ 11.30 ಕ್ಕೆ ಜ್ಞಾನಭಾರತಿ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜರುಗಲಿದೆ.

ಘನತೆವೆತ್ತ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಸಹಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಘಟಿಕೋತ್ಸವದಲ್ಲಿ ಉಪಸ್ಥಿತರಿರುವರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹೆಗಾರರಾದ ಡಾ. ಸಿ. ರಂಗರಾಜನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಘಟಿಕೋತ್ಸವವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)