ಉತ್ತರಾಖಂಡದಲ್ಲಿ ಕರ್ನಾಟಕದ ಚಾರಣಿಗರ ಸಾವು: ರಾಜ್ಯಪಾಲರ ಸಂತಾಪ

varthajala
0
ಬೆಂಗಳೂರು 06.06.2024: ಉತ್ತರಾಖಂಡ್‌ನ ಸಹಸ್ತ್ರತಲ್‌ನಲ್ಲಿ ಚಾರಣಕ್ಕೆ ತೆರಳಿದ್ದ ಕೆಲವು ಕನ್ನಡಿಗರು ಮೃತ ಹೊಂದಿದ ಹಿನ್ನಲೆಯಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. 

"ಉತ್ತರಾಖಂಡದ ಚಾರಣಕ್ಕೆ ತೆರಳಿ ಹವಾಮಾನ ವೈಪರಿತ್ಯದಿಂದ ಅಪಾಯಕ್ಕೆ ಸಿಲುಕಿ, ಕರ್ನಾಟಕದ ಕೆಲವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ." ಎಂದು ರಾಜ್ಯಪಾಲರು ಎಕ್ಸ್ ಖಾತೆಯ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. 

Post a Comment

0Comments

Post a Comment (0)