ಮೀಡಿಯಾ ಕನೆಕ್ಟ್‌ಗೆ ಭರವಸೆಯ ಪಿಆರ್‌ ಸೇವಾ ಪ್ರಶಸ್ತಿ

varthajala
0

 ಬೆಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಸೇವೆ ಸಲ್ಲಿಸಿದ ಮೀಡಿಯಾ ಕನೆಕ್ಟ್‌ ಸಂಸ್ಥೆ ಮತ್ತೊಂದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ನಗರದಲ್ಲಿ ಏಷ್ಯಾ ಟುಡೆ ಮೀಡಿಯಾ ವತಿಯಿಂದ ಆಯೋಜಿಸಲಾದ  ಪ್ರೈಡ್‌ ಆಫ್‌ ನೇಷನ್‌ ಅವಾರ್ಡ್‌ 2024 ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ಗೆ "ಕರ್ನಾಟಕದ ವರ್ಷದ ಅತ್ಯಂತ ಭರವಸೆಯ ಹೆಲ್ತ್‌ಕೇರ್ ಪಿಆರ್ ಸೇವಾ ಸಂಸ್ಥೆ" ಪ್ರಶಸ್ತಿ ಪ್ರದಾನ  ಮಾಡಲಾಗಿದೆ.


ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮೀಡಿಯಾ ಕನೆಕ್ಟ್‌ ಸಂಸ್ಥೆಯ ಸಂಸ್ಥಾಪಕರಾದ  ದಿವ್ಯಾ ರಂಗೇನಹಳ್ಳಿಯವರಿಗೆ ನೀಡಿ ಗೌರವಿಸಲಾಯಿತು. ಬೆಳಗಾವಿ ಸಂಸದ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಪ್ರಸಿದ್ಧ ಬಾಲಿವುಡ್ ನಟ ಗುಲ್ಶನ್ ಗ್ರೋವರ್‌, ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಖ್ಯಾತ ಹೃದ್ರೋಗ ತಜ್ಞ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ದಿವ್ಯಾ ರಂಗೇನಹಳ್ಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
                                      
ಕಳೆದ ಹತ್ತು ವರ್ಷಗಳಿಂದ  ಪಿಆರ್‌ ಕ್ಷೇತ್ರದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೀಡಿಯಾ ಕನೆಕ್ಟ್ ಸಂಸ್ಥೆ ತನ್ನ ಕ್ಲೈಂಟ್‌ಗಳಿಗೆ ಅತ್ಯುತ್ತಮ ಸೇವೆ ನೀಡಿದ್ದಕ್ಕಾಗಿ ಹಲವಾರು ಪ್ರಶಸ್ತಿಗಳನ್ನು ಈಗಾಗಲೆ ಪಡೆದುಕೊಂಡಿದ್ದು, ಇದೀಗ ಮತ್ತೊಂದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.  

ಈ ಸುದ್ದಿಯನ್ನು ನಿಮ್ಮ ಗೌರವಾನ್ವಿತ ಮಾಧ್ಯಮದಲ್ಲಿ ಪ್ರಕಟಿಸಲು ಮನವಿ.
ಧನ್ಯವಾದಗಳು.
ಈ ವರದಿಯನ್ನು ತಮ್ಮ ಮಾಧ್ಯಮದಲ್ಲಿ ಪ್ರಕಟಿಸಬೇಕೆಂದು ಕೋರಿಕೆ
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 6364466240, 6364409651


Post a Comment

0Comments

Post a Comment (0)