ಲೆಕ್ಕಪರಿಶೋಧನಾ ಸಂಸ್ಥೆಯನ್ನು ನೇಮಕಾತಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಒದಗಿಸಲು ಸೂಚನೆ

varthajala
0

 ಬೆಂಗಳೂರು (ಕರ್ನಾಟಕ ವಾರ್ತೆ) : 2023-24ನೇ ಸಾಲಿನ ಲೆಕ್ಕಪರಿಶೋಧನೆ ಕೈಗೊಳ್ಳುವ ಸಂಬAಧ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 63 ಮತ್ತು ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8) ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು 2004 ನಿಯಮ 8-ಬಿ(8) ರನ್ವಯ ಯಾವುದೇ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಾಹಕರು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧಾನಾ ಫರ್ಮ್ನ್ನು ನೇಮಕ ಮಾಡಿಕೊಂಡ ಬಗ್ಗೆ, ವಾರ್ಷಿಕ ಮಹಾಸಭೆಯ ದಿನಾಂಕದಿAದ 07 ದಿನದೊಳಗಾಗಿ ಇಲಾಖಾ ಲೆಕ್ಕಪರಿಶೋಧಕರಿಗೆ/ಸನ್ನದು ಲೆಕ್ಕಪರಿಶೋಧನಾ ಸಂಸ್ಥೆಗೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಿಗೆ ತಿಳಿಸಬೇಕಾಗಿರುತ್ತದೆ.

                       

ಆದರೆ ಜಿಲ್ಲೆಯ ಬಹುಪಾಲು ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಇಲಾಖಾ ಲೆಕ್ಕಪರಿಶೋಧಕರ/ಸನ್ನದು ಲೆಕ್ಕಪರಿಶೋಧನಾ ಸಂಸ್ಥೆಗೆ ನೇಮಕಾತಿ ಬಗ್ಗೆ ಈ ಕಛೇರಿಗೆ ಮಾಹಿತಿ ಸಲ್ಲಿಸಿರುವುದಿಲ್ಲ. ಆದ್ದರಿಂದ ಈವರೆಗೂ ಸದರಿ ಮಾಹಿತಿಯನ್ನು ಸಲ್ಲಿಸಿದ ಸಹಕಾರ ಸಂಘಗಳು ಈ ಪ್ರಕಟಣೆಯಾದ 07 ದಿನದೊಳಗಾಗಿ ವಾರ್ಷಿಕ ಮಹಾಸಭೆಯಲ್ಲಿ ಇಲಾಖಾ ಲೆಕ್ಕಪರಿಶೋಧಕರನ್ನು/ಸನ್ನದು ಲೆಕ್ಕಪರಿಶೋಧನಾ ಸಂಸ್ಥೆಯನ್ನು ನೇಮಕಾತಿ ಮಾಡಿಕೊಂಡಿರುವ ಬಗ್ಗೆ ಮಾಹಿತಿಯನ್ನು ವಾರ್ಷಿಕ ಮಹಾಸಭೆಯ ನಡವಳಿಯೊಂದಿಗೆ ಜಂಟಿ ನಿರ್ದೇಶಕರ ಕಛೇರಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಬೆಂಗಳೂರು ಜಿಲ್ಲೆ, ಬೆಂಗಳೂರು, ಕೊಠಡಿ ಸಂಖ್ಯೆ-421,422. ಮೊದಲನೇ ಬ್ಲಾಕ್, ನಾಲ್ಕನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು -560001 ಅಥವಾ ಇ-ಮೇಲ್ ವಿಳಾಸ jdbangaloreca421@gmail.com ಗೆ ಸಲ್ಲಿಸಬೇಕು. ಇಲ್ಲವಾದಲ್ಲಿ ಸಹಕಾರ ಸಂಘಗಳ ಅಧಿನಿಯಮ 1960 ರ ಕಲಂ 63 (2) ರಂತೆ ಸಹಕಾರ ಸಂಘಗಳ ಲೆಕ್ಕಪರಿಶೋಧನೆ ನಿರ್ದೇಶಕರಿಗೆ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಂಘದ ಲೆಕ್ಕಪತ್ರಗಳ ಪರಿಶೋಧನೆಯನ್ನು ಮಾಡಲು ಲೆಕ್ಕಪರಿಶೋಧಕರನ್ನು ಇಲಾಖೆಯಿಂದ ನೇಮಕ ಮಾಡಲಾಗುವುದು ಎಂದು ಬೆಂಗಳೂರು ನಗರ ಜಿಲ್ಲೆಯ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

Post a Comment

0Comments

Post a Comment (0)