ಹೊಸಕೋಟೆ ಲಯನ್ಸ್ ಸಂಸ್ಥೆಯಿಂದ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

varthajala
0

 ಹೊಸಕೋಟೆ ಲಯನ್ಸ್ ಸಂಸ್ಥೆಯಿಂದ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. 

 ಗಾಂಧಿ ಜಯಂತಿ ಪ್ರಯುಕ್ತ ಈ ದಿನ ಹೊಸಕೋಟೆ ಲಯನ್  ಸಂಸ್ಥೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ  ಸ್ವಚ್ಛತಾ ಅಭಿಯಾನ ಹಾಗೂ ಅಂಗರ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. 




ಈ ಕಾರ್ಯಕ್ರಮದ ಉದ್ಘಾಟನೆ ಹೊಸಕೋಟೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜಿ.ಎಂ.ಎಫ್.ಸಿ . ಶ್ರೀ ಸತೀಶ. ಬಿ.ರವರು ನೆರವೇರಿಸಿ ಮಾತನಾಡತ್ತ  ಅಂತರಾಷ್ಟ್ರೀಯ ಮಟ್ಟದಲ್ಲಿ ಲಯನ್ ಸಂಸ್ಥೆ ಉತ್ತಮ ಸೇವಾ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿ,  ಈ ದಿನ ಒಂದು ಒಳ್ಳೆ ಉತ್ತಮ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಿದ್ದೀರಿ ನಿಮಗೆ ಶುಭವಾಗಲಿ ಎಂದು ಹಾರೈಸಿದರು.

ಅತಿಥಿಗಳಾಗಿ ಆಗಮಿಸಿದ್ದ ಅಪರ  ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಚೈತ್ರ ವಿ ಕುಲಕರ್ಣಿ ರವರು ಮಾತನಾಡುತ್ತಾ 50 ವರ್ಷಗಳಿಂದ ಹೊಸಕೋಟೆ ಲಯನ್ ಸಂಸ್ಥೆ ಉತ್ತಮ ಕಾರ್ಯಗಳನ್ನು ಮಾಡುತ್ತಾ ಬಂದಿದೆ ಎಂದು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.    ಪ್ರಾರಂಭದಲ್ಲಿ ಪ್ರಾಸ್ತಾವಿಕ  ಭಾಷಣ ಮಾಡಿದ ಜಿಲ್ಲಾ ಪಿ. ಆರ್. ಓ. ಜಿ.ಎಸ್. ಮಂಜುನಾಥ್ 

ಪ್ರಪಂಚದಾತ್ಯಂತ 210 ದೇಶಗಳಲ್ಲಿ ಲಯನ್ಸ್ ಸಂಸ್ಥೆ 107  ವರ್ಷಗಳಿಂದ ಉತ್ತಮ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ ಎಂದು ತಿಳಿಸಿ, ಹೊಸಕೋಟೆಯಲ್ಲಿ 50 ವರ್ಷಗಳಿಂದ ಅನೇಕ ಸೇವಾ ಕಾರ್ಯಗಳನ್ನು ಮಾಡಿದ್ದೇವೆ ಪ್ರಮುಖವಾಗಿ ಆರೋಗ್ಯ ವಿದ್ಯೆ ಇದಕ್ಕೆ ಪ್ರಾಮುಖ್ಯತೆ ನೀಡಿದ್ದೇವೆ  ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ  ವಹಿಸಿದ್ದ ಎಂ.ಬಿರಪ್ಪ ಮಾತನಾಡುತ್ತಾ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸೇವಾ ಕಾರ್ಯಗಳನ್ನು  ಮಾಡುತ್ತೇವೆ ಎಂದು ಭರವಸೆ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಎನ್ ವೆಂಕಟಸ್ವಾಮಿ ,ಟ್ರಸ್ಟ್ ಅಧ್ಯಕ್ಷರಾದ ಸಿ  ಶ್ರೀನಿವಾಸಯ್ಯ, ಕಾರ್ಯದರ್ಶಿ ಎಚ್. ಸಿ. ಷಣ್ಮುಖo, ವಿ.ಎನ್. ಮಂಜುನಾಥ್, ಹಾಗೂ ಕ್ಲಬ್ಬಿನ ಪದಾಧಿಕಾರಿಗಳು  ಉಪಸ್ಥಿತರಿದ್ದರು.

Post a Comment

0Comments

Post a Comment (0)