ಬೆಂಗಳೂರು : ನಾಗರಬಾವಿ ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಕಾಲೋನಿಯ ಶ್ರೀ ವರಸಿದ್ಧಿ ವಿನಾಯಕ ದೇವಾಲಯ ಮತ್ತು ಶ್ರೀ ಸುಮುಖ ಸಂಪದ ಚಾರಿಟೇಬಲ್ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ ಎಂಟರಂದು ಸಂಜೆ ಗುರು ಡಾ|| ಶ್ರೀಮತಿ ದರ್ಶಿನಿ ಮಂಜುನಾಥ್ ಪಿ.ಎಚ್ ಡಿ., (ಪರ್ಫಾರ್ಮಿಂಗ್ ಆರ್ಟ್ಸ್ ನ ಸಂಶೋಧಕರು, ಮತ್ತು ನೃತ್ಯ ಸಂಯೋಜಕರು) ಅವರ ನಿರ್ದೇಶನದಲ್ಲಿ ನೃತ್ಯ ದಿಶಾ ಟ್ರಸ್ಟ್ ನ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನ ಕಾರ್ಯಕ್ರಮ ಜರಗಿತು. ಶ್ರೀ ಎಂ.ಟಿ. ಶ್ರೀನಿವಾಸನ್ ಕಲಾವಿದರನ್ನು ಸ್ವಾಗತಿಸಿದರು.
ಇಲ್ಲಿ ನೃತ್ಯ ದಿಶಾ ಟ್ರಸ್ಟ್ ನ ಹಿರಿಯ ವಿದ್ಯಾರ್ಥಿಗಳಾದ ಕು|| ಉಮಾ ಮತ್ತು ಕಾರ್ತೀಕ್ ಇವರಿಬ್ಬರೂ ಕಾರ್ಯಕ್ರಮದ ನಿರೂಪಣೆಯನ್ನು ಬಹಳ ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಶ್ರೀ ನರಸಿಂಹಮೂರ್ತಿ ವಂದನಾರ್ಪಣೆ ಮಾಡಿದರು. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.