ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಫೆಬ್ರವರಿ 13, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಶ್ರೀಮತಿ ಗೀತಾ ಭತ್ತದ್ ಅವರ ನಿರ್ದೇಶನದಲ್ಲಿ ಗಾನಸಿದ್ಧಗಂಗಾ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ ಸೇವೆಗಳು ಜರುಗಿದವು.