ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾ. ಲಿಮಿಟೆಡ್ (ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ಗಣಿಗಾರಿಕೆಯಲ್ಲಿ ತೊಡಗಿರುವ ಕರ್ನಾಟಕ ಸರ್ಕಾರದ ಸಂಪೂರ್ಣ ಮಾಲೀಕತ್ವದ ಒಂದು ಉನ್ನತ ಸಾರ್ವಜನಿಕ ಉದ್ದಿಮೆಯಾಗಿದ್ದು, ಸಂಸ್ಥೆಯು 2023-24ನೇ ಸಾಲಿನಲ್ಲಿ ರೂ.1403.58 ಕೋಟಿಗಳ ವಹಿವಾಟು ನಡೆಸಿ ರೂ.867.33 ಕೋಟಿ ತೆರಿಗೆ ಪೂರ್ವ ಲಾಭ ಹಾಗೂ ರೂ.643.20 ಕೋಟಿ ತೆರಿಗೆ ನಂತರದ ಲಾಭ ಗಳಿಸಿರುತ್ತದೆ.
ದಿನಾಂಕ 05.03.2025 ರಂದು ನಡೆದ 354ನೇ ಮಂಡಳಿ ಸಭೆಯಲ್ಲಿ ಕಂಪನಿಯು 2023-24ನೇ ಸಾಲಿನಲ್ಲಿ ಗಳಿಸಿರುವ ನಿವ್ವಳ ಲಾಭದ ಮೇಲೆ μÉೀರುದಾರರಿಗೆ ಅಂದರೆ ಸರ್ಕಾರಕ್ಕೆ ರೂ.191.43 ಕೋಟಿಗಳನ್ನು ಶೇಕಡಾ 30% ಲಾಭಾಂಶವಾಗಿ ನೀಡಲು ಮಂಡಳಿ ನಿರ್ದೇಶಕರು ಒಪ್ಪಿಗೆ ನೀಡಿದ್ದು, ದಿನಾಂಕ 05.03.2025 ರಂದು ನಡೆದ 58ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅನುಮೋದನೆಗೊಂಡಿರುತ್ತದೆ.
ಆರ್ಥಿಕ ಇಲಾಖೆಯ ದಿನಾಂಕ 15.07.2024ರ ಆದೇಶ ಸಂಖ್ಯೆ.ಆಇ 51 ಐಎನ್ವಿ 2024 ರನ್ವಯ ಶೇಕಡಾ 30% ವಿಶೇಷ ಲಾಭಾಂಶ ರೂ.1195.63 ಕೋಟಿಗಳನ್ನು ದಿನಾಂಕ 31.03.2024ರ ಬ್ಯಾಲೆನ್ಸ್ ಶೀಟ್ ಪ್ರಕಾರ ನಗದು ಮತ್ತು ನಗದು ಸಮಾನದ ಮೊತ್ತದ ಮೇಲೆ ವಿಶೇಷ ಲಾಭಾಂಶವಾಗಿ ನೀಡಲು ಮಂಡಳಿ ನಿರ್ದೇಶಕರು ಒಪ್ಪಿಗೆ ನೀಡಿದ್ದು, ದಿನಾಂಕ 05.03.2025 ರಂದು ನಡೆದ 58ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅನುಮೋದನೆಗೊಂಡಿರುತ್ತದೆ.
ಪ್ರತಿ ವರ್ಷ ಈ ನಿಗಮದಿಂದ ರೂ.15.00 ಕೋಟಿಗಳನ್ನು ಮಾನ್ಯ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಆಯವ್ಯಯದಲ್ಲಿ ನಿಗದಿಪಡಿಸಲಾಗುತ್ತಿದ್ದು, 2023-24ನೇ ಸಾಲಿಗೆ ರೂ.15.00 ಕೋಟಿಗಳನ್ನು ನಿಗದಿಪಡಿಸಿದ್ದು, ರೂ.15.00 ಕೋಟಿಗಳನ್ನು ಇಂದು ಮಾನ್ಯ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಿದರು.
ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ಮತ್ತು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾಪೆರ್Çೀರೇಷನ್ ಲಿಮಿಟೆಡ್ನ ಅಧ್ಯಕ್ಷರಾದ ಜಿ.ಎಸ್.ಪಾಟೀಲ್, 2023-24ನೇ ಸಾಲಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ರೂ.15.00 ಕೋಟಿಗಳ ಧನಾದೇಶವನ್ನು, ರೂ.191.43 ಕೋಟಿಗಳ ಲಾಭಾಂಶದ ಧನಾದೇಶವನ್ನು ಹಾಗೂ ರೂ.1195.63 ಕೋಟಿಗಳ ವಿಶೇಷ ಲಾಭಾಂಶವನ್ನು ಈ ದಿನ ಸನ್ಮಾನ್ಯ ಮುಖ್ಯ ಮಂತ್ರಿಗಳಿಗೆ ಅರ್ಪಿಸಿದರು.
ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ರಮಣ್ ದೀಪ್ ಚೌಧರಿ, ಕೆ.ಎಸ್.ಎಮ್.ಸಿ.ಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ್ ಬಿಳಗಿ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.