ಏ.28ಕ್ಕೆ ಮುಖ್ಯಮಂತ್ರಿಗಳ ಜಿಲ್ಲಾ ಭೇಟಿ: ಅಗತ್ಯ ಸಿದ್ಧತೆ ಕೈಗೊಳ್ಳಲು ಸಚಿವ ಮುನಿಯಪ್ಪ ಸೂಚನೆ

VK NEWS
0

ಬೆಂ.ಗ್ರಾ.ಜಿಲ್ಲೆ, .19(.ವಾ):- ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಏಪ್ರಿಲ್ 28 ರಂದು ಜಿಲ್ಲೆಗೆ ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಸೂಚಿಸಿದರು.

 ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸರ್ಕಾರ ಅಧಿಕಾರಕ್ಕೆ ಬಂದು ಮುಂದಿನ ತಿಂಗಳಿಗೆ 2 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಎರಡು ವರ್ಷಗಳ ಸಾಧನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.


ಜಿಲ್ಲೆಯಲ್ಲಿ ನಿವೇಶನ ರಹಿತ ಅರ್ಹರನ್ನು ಗುರ್ತಿಸಲಾಗಿದ್ದುಫಲಾನುಭವಿಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸಲಾಗುವುದುಇದಕ್ಕಾಗಿ ಸಂಬಂಧಿಸಿದ ಆಯಾ ತಾಲ್ಲೂಕು ತಹಶೀಲ್ದಾರ್ ಗಳುಇಒ ಗಳು ಶೀಘ್ರ ಫಲಾನುಭವಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿ ಎಂದರುಪೋಡಿ ದುರಸ್ತಿ ಜಮೀನುಗಳಿಗೆ ಹಕ್ಕು ಪತ್ರ ವಿತರಿಸುವುದುವಸತಿ ರಹಿತರಿಗೆ ವಸತಿ ಸೌಲಭ್ಯ ವಿತರಣೆ ಮಾಡಲಾಗುವುದು.


ಜಿಲ್ಲೆಯಲ್ಲಿ ಶಂಕುಸ್ಥಾಪನೆಗೆಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಿ, ವಿವಿಧ ಇಲಾಖೆಗಳು ಎರಡು ವರ್ಷಗಳಲ್ಲಿ ಮಾಡಿರುವಂತಹ ಆಯವ್ಯಯ, ಅಭಿವೃದ್ಧಿ ಕೆಲಸಗಳು, ಸೌಲಭ್ಯ ಪಡೆದ ಫಲಾನುಭವಿಗಳ ಮಾಹಿತಿ ನೀಡಿ ಜೊತೆಗೆ ಕಾರ್ಯಕ್ರಮದಲ್ಲಿ ವಿವಿಧ ಸೌಲಭ್ಯಗಳನ್ನು ವಿತರಿಸುವ ಸಲುವಾಗಿ ಸಂಬಂಧಪಟ್ಟ ಇಲಾಖೆಗಳು ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ವರದಿ ನೀಡಿ ಎಂದರು.

Post a Comment

0Comments

Post a Comment (0)