ಹನುಮ ಜಯಂತಿ ಸಂಭ್ರಮ: ಭಕ್ತರಿಂದ ಮಹಾಬಲಿ ಹನುಮಂತನ ನಾಮ ಜಪ

varthajala
0

 ನವದೆಹಲಿ: ದೇಶದಾದ್ಯಂತ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇಗುಲಕ್ಕೆ ಆಗಮಿಸುತ್ತಿರುವ ಭಕ್ತರು ಮಹಾಬಲಿ ಹನುಮಂತನ ನಾಮಸ್ಮರಣೆ ಮಾಡುತ್ತಾ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ಹನುಮಂತನ ದೇವಾಲಯ, ಮಧ್ಯಪ್ರದೇಶದ ಮಹಾಕಾಳೇಶ್ವರ ದೇವಾಲಯ, ದೆಹಲಿಯ ಹನುಮಾನ್ ಬಾಬಾ ದೇವಾಲಯ ಹಾಗೂ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಾಲಯಕ್ಕೆ ಆಗಮಿಸುತ್ತಿರುವ ಭಕ್ತರು ಸಾಲುಗಟ್ಟಿ ನಿಂತು ಹನುಮಂತನೆ ದರ್ಶನ ಪಡೆಯುತ್ತಿದ್ದಾರೆ.

ಹನುಮ ದೇವರ ಸ್ಮರಣೆ ಎಲ್ಲಿರಲ್ಲೂ ಒಂದು ವಿಶೇಷ ಶಕ್ತಿಯನ್ನು ತುಂಬುತ್ತದೆ. ರಾಮದೂತನನ್ನು ನೆನೆಯುವ ದಿನವೇ ಹನುಮ ಜಯಂತಿಯಾಗಿದ್ದು, ತ್ರೇತಾಯುಗದಲ್ಲಿ ರಾಮಭಕ್ತನಾಗಿ ಅವತಾರ ಮಾಡಿದ ಹನುಮನಿಗೆ ಅನೇಕ ವಿಧವಾದ ಶಕ್ತಿಯಿರುವುದನ್ನು ರಾಮಾಯಣದಲ್ಲಿ ತಿಳಿದುಕೊಳ್ಳಬಹುದು. ಭಾರತೀಯ ಶಾಸ್ತ್ರಗಳಲ್ಲೂ ಹನಮಂತನ ಸ್ಮರಣೆಯಿಂದಾಗುವ ಲಾಭಗಳ ಬಗ್ಗೆ ಸಾಕಷ್ಟು ಉಲ್ಲೇಖಗಳಿವೆ.


Post a Comment

0Comments

Post a Comment (0)