ಎಸ್‌ಪಿ ವಿರುದ್ಧ ಸಿಎಂ ಗರಂ – ವೇದಿಕೆಯಲ್ಲೇ ತರಾಟೆ

varthajala
0

 


ಬೆಳಗಾವಿ: ಕಾಂಗ್ರೆಸ್‌ (Congress) ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆ ಪ್ರವೇಶಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah)  ಗರಂ ಆಗಿ ವೇದಿಕೆ ಮೇಲೆಯೇ ಬೆಳಗಾವಿ (Belagavi) ಹೆಚ್ಚುವರಿ ಎಸ್‌ಪಿ ವಿರುದ್ಧ ಗರಂ ಆದ ಆದ ಪ್ರಸಂಗ ಇಂದು ಬೆಳಗಾವಿಯಲ್ಲಿ ನಡೆದಿದೆ.

ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಈ ವೇಳೆ ಗರಂ ಆದ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡರು.

ಆಗಿದ್ದು ಏನು?
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಇಂದು ಕಾಂಗ್ರೆಸ್‌ ಸಮಾವೇಶವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಬೇರೆ ನಾಯಕರ ಭಾಷಣದವರೆಗೆ ಸುಮ್ಮನೇ ಕುಳಿತಿದ್ದ ಬಿಜೆಪಿ ಕಾರ್ಯಕರ್ತರು ಸಿಎಂ ಭಾಷಣ ಮಾಡುವಾಗ ಕಪ್ಪು ಪಟ್ಟಿಯನ್ನು ತೋರಿಸಿ ಪ್ರತಿಭಟಿಸಿದರು.

ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿಎಂ ಒಂದು ಕ್ಷಣ ಭಾಷಣ ಮಾಡುವುದನ್ನು ನಿಲ್ಲಿಸಿದ್ದಾರೆ. ನಿಲ್ಲಿಸಿದ ಬಳಿಕ ಯಾರದು ಎಸ್‌ಪಿ ಎಂದು ವೇದಿಕೆಯಲ್ಲೇ ಕರೆದಿದ್ದಾರೆ. ಹೆಚ್ಚುವರಿ ಎಸ್‌ಪಿ ಬರುತ್ತಿದ್ದಂತೆ ಏನ್ರೀ ಇದು, ಏನು ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿ ಕೈ ಎತ್ತಿ ಸಿಟ್ಟು ಹೊರಹಾಕಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಎಂಬಿ ಪಾಟೀಲ್‌ ಅವರು ಸಿಎಂ ಹತ್ತಿರ ಬಂದು ಸಮಾಧಾನ ಮಾಡಿದ್ದಾರೆ.

Post a Comment

0Comments

Post a Comment (0)