ಖೇಲೋ ಇಂಡಿಯಾ ರಾಜ್ಯ ಉತ್ಕøಷ್ಟತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆಗೆ ಆಹ್ವಾನ

varthajala
0
ಖೇಲೋ ಇಂಡಿಯಾ ರಾಜ್ಯ ಉತ್ಕøಷ್ಟತಾ ಕೇಂದ್ರ ವಿದ್ಯಾನಗರ ಬೆಂಗಳೂರು ಇಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಪ್ರತಿಭಾನ್ವಿತರಾಗಿರುವ ಹಾಗೂ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ಶ್ರೀ ಜಯ ಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ ಕ್ರೀಡಾಶಾಲೆ, ವಿದ್ಯಾನಗರ, ಬೆಂಗಳೂರು ಕೇಂದ್ರಗಳಲ್ಲಿ 2025ರ ಮೇ 5 ಮತ್ತು 6 ರಂದು ಆಯ್ಕೆ ಪ್ರಕ್ರಿಯೆಯನ್ನು ಸಂಘಟಿಸಲಾಗಿದೆ. ಆಸಕ್ತ ಅರ್ಹ ಕ್ರೀಡಾಪಟುಗಳು ಆಯ್ಕೆಯಲ್ಲಿ ಭಾಗವಹಿಸಬಹುದಾಗಿದೆ.

ಆಯ್ಕೆಗಾಗಿ ಭಾಗವಹಿಸುವ ಕ್ರೀಡಾ ಪಟುಗಳು ದಿನಾಂಕ 01-07-2025 ಕ್ಕೆ 15 ವರ್ಷ ಮೇಲ್ಪಟ್ಟವರಾಗಿದ್ದು 21 ವರ್ಷ ಒಳಪಟ್ಟವರಾಗಿರಬೇಕು. ಪ್ರಸಕ್ತ 2024-25ನೇ ಸಾಲಿನಲ್ಲಿ 10ನೇ ತರಗತಿಯನ್ನು ಅಭ್ಯಾಸ ಮಾಡುತ್ತಿದ್ದು ಶೈಕ್ಷಣಿಕ ವರ್ಷ 2025-26ನೇ ಸಾಲಿನ ಪ್ರಥಮ ಪದವಿಪೂರ್ವ ಕೊರ್ಸ್ (ಪ್ರಥಮ ಪಿಯುಸಿ) ಗೆ ಪ್ರವೇಶ ಪಡೆಯುವ ಅರ್ಹತೆ ಉಳ್ಳವರಾಗಿರಬೇಕು. ಅಂತರಾಷ್ಟ್ರೀಯ ಕ್ರೀಡಾಪಟುಗಳಿಗೆ 2 ವರ್ಷಗಳ ವಯೋಮಿತಿಯನ್ನು ಸಡಿಲಗೊಳಿಸಲಾಗುವುದು, ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಗರಿಷ್ಠ ವಯೋಮಿತಿಯನ್ನು ಸಾಮರ್ಥದ ಆಧಾರದ ಮೇಲೆ ನಿಗದಿಪಡಿಸಲಾಗುವುದು.

ಪಾಸ್ ಪೋರ್ಟ್ ಅಳತೆಯ ಇತ್ತಿಚಿನ ಭಾವಚಿತ್ರದೊಂದಿಗೆ ಸ್ವವಿವರದ ಅರ್ಜಿಯನ್ನು ಆಯ್ಕೆ ಸಂದರ್ಭದಲ್ಲಿ ಸಲ್ಲಿಸಬೇಕು.ಕರ್ನಾಟಕದಲ್ಲಿ ಜನಿಸಿದ ಹಾಗೂ ವಾಸಿಸುತ್ತಿರುವವರಿಗೆ ಆದ್ಯತೆ ನೀಡಲಾಗುವುದು. ಆಧಾರ್ ಕಾರ್ಡ್ ನಕಲು ಪ್ರತಿ ಹಾಗೂ ಮೂಲ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಕನಿಷ್ಠ ಪಕ್ಷ ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ (ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ, ರಾಜ್ಯ ಶಾಲಾ ಕ್ರೀಡಾಕೂಟ, ವಿಶ್ವವಿದ್ಯಾನಿಲಯ ಸಂಘಟಿಸುವ ಕ್ರೀಡಾಕೂಟ ಪದಕ ಪಡೆದಿರಬೇಕು. ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ (ಅಥ್ಲೆಟಿಕ್ಸ್ ಫೆಡರೆಷನ್, ಶಾಲಾ ರಾಷ್ಟ್ರೀಯ ಫೆಡರಷನ್ ಹಾಗೂ ಅಖಿಲ ಭಾರತ ವಿಶ್ವವಿದ್ಯಾನಿಲಯ ಸಂಘಟಿಸುವ ಕ್ರೀಡಾಕೂಟ) ಭಾಗವಹಿಸಿ ಪದಕ ಪಡೆದವರಿಗೆ ಪ್ರಾಶಸ್ತ್ಯ ನೀಡಲಾಗುವುದು.
ಕಳೆದ ಹಾಗೂ ಪ್ರಸ್ತುತ ಸಾಲಿನ ಕ್ರೀಡಾ ಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು. ಕರ್ನಾಟಕದಲ್ಲಿ ಜನಿಸಿದ ಹಾಗೂ ವಾಸಿಸುತ್ತಿರುವ ಬಾಲಕ ಬಾಲಕಿಯರು ಹಾಗೂ ಕ್ರೀಡಾ ಕೋಟಾದಡಿಯಲ್ಲಿ ನೇಮಕಗೊಂಡಿರುವ ಕ್ರೀಡಾಪಟುಗಳು ಭಾಗವಹಿಸಬಹುದು.

ಆಯ್ಕೆ ಪ್ರಕ್ರಿಯೆಯಲ್ಲಿ ಇಲಾಖೆಯ ಕ್ರೀಡಾಶಾಲೆ / ನಿಲಯ ಯೋಜನೆಯಲ್ಲಿ ಆಯ್ಕೆಗೊಂಡಿರುವ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ. ಈ ಆಯ್ಕೆ ಪ್ರಕ್ರಿಯೆ ದಿನದಂದು ಸಂಘಟಿಸಲಾಗುವ ಆಯ್ಕೆ ಪರೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ.
ಜನ್ಮದಿನಾಂಕದ ದಾಖಲಾತಿಗಾಗಿ ಜನನ ಪ್ರಮಾಣ ಪತ್ರ ಅಥವಾ ಶೈಕ್ಷಣಿಕ ಶಾಲಾಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ಹಾಗೂ 10 ನೇ ತರಗತಿ ತೇರ್ಗಡೆಗೊಂಡಿರುವ ಅಂಕಪಟ್ಟಿಯ ನಕಲು ಪ್ರತಿ ಹಾಗೂ ಮೂಲ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಕ್ರೀಡೆಗಳಲ್ಲಿ ಸಾಧಿಸಲಾಗಿರುವ ಸಾಧನೆ ಹಾಗೂ ಸಾಮಥ್ರ್ಯದ ಪ್ರಮಾನಪತ್ರ ನಕಲು ಪ್ರತಿ ಹಾಗೂ ಮೂಲ ಪ್ರತಿಯನ್ನು ಕಡಾಯವಾಗಿ ಸಲ್ಲಿಸಬೇಕು. ಆರೋಗ್ಯ ದೃಢೀಕರಣ ಹಾಗೂ ದೈಹಿಕ ಸಾಮಥ್ರ್ಯದ ಪ್ರಮಾಣ ಪತ್ರವನ್ನು ಸರ್ಕಾರಿ ವೈದ್ಯರಿಂದ ದೃಢೀಕರಿಸಿದ ನಕಲು ಪ್ರತಿ ಹಾಗೂ ಮೂಲ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಗೊಂಡ ಕ್ರೀಡಾಪಟುಗಳಿಗೆ ಇಲಾಖಾ ವತಿಯಿಂದ ಪರಿಶೀಲನಾ ತರಬೇತಿ ಶಿಬಿರವನ್ನು ಏರ್ಪಡಿಸಿ ಅರ್ಹತೆ ಗಳಿಸಿದ ಕ್ರೀಡಾಪಟುಗಳಿಗೆ ಪ್ರವೇಶವನ್ನು ನೀಡಲಾಗುವುದು.

ಉದ್ದೀಪನ ಮದ್ದು ಸೇವನೆಯಿಂದಾಗಿ ಅಮಾನತ್ತಿನ ಶಿಕ್ಷೆಗೆ ಒಳಪಟ್ಟಿರುವ ಕ್ರೀಡಾಪಟುಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಈ ಎಲ್ಲಾ ಅರ್ಹತೆಗಳನ್ನು ಹೊಂದಿರುವವರು ಮಾತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಹಕ್ಕು ನಿರಾಕರಣ ನಿಯಮಗಳು:
ಆಯ್ಕೆಯ ಸಮಯದಲ್ಲಿ ಯಾವುದೇ ಗಾಯಗಳು, ಅನಾರೋಗ್ಯ ಯಾವುದೇ ಇತರ ಸಾವು ನೋವುಗಳು ಶಾಶ್ವತ ಅಂಗವೈಕಲ್ಯ ಮತ್ತು ಜೀವಹಾನಿ ಸಂಭವಿಸಿದರೆ ಸಂಸ್ಥೆ ಅಥವಾ ಇಲಾಖೆ ಜವಾಬ್ದಾರಿಯುತ ವಾಗಿರುವುದಿಲ್ಲ.

ಆಯ್ಕೆಗೆ ಹಾಜರಾಗುವ ಕ್ರೀಡಾಪಟುಗಳಿಗೆ ಯಾವುದೇ ದಿನ ಭತ್ಯೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಆಯ್ಕೆಯ ಸಮಯದಲ್ಲಿ ಲಘು ಭೋಜನವನ್ನು ಮಾತ್ರ ನೀಡಲಾಗುತ್ತದೆ.
ಆಯ್ಕೆ ಟ್ರಯಲ್ ನಲ್ಲಿ ಫೆಡರೇಶನ್ ನಿಂದ ಅನುಮೋದಿಸಲ್ಪಟ್ಟ ಮತ್ತು ಪ್ರಮಾಣೀಕೃತ ಕ್ರೀಡಾ ಸಾಮಗ್ರಿಗಳನ್ನು ಬಳಸಲಾಗುವುದು.

ಖೇಲೋ ಇಂಡಿಯಾ ಯೋಜನೆಯು 2025-26 ನೇ ಸಾಲಿನವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.
ಶ್ರೀ ಜಯ ಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರಕ್ಕೆ ತಲುಪಲು ಮಾರ್ಕೆಟ್ ನಿಂದ 282, 282ಸಿ, 282ಇ, 298 ಬಿಎಂಟಿಸಿ ಬಸ್ಸುಗಳು ಕೆ.ಆರ್. ಮಾರ್ಕೆಟ್ ನಿಂದ ಪ್ರಾರಂಭಗೊಂಡು ನೇರವಾಗಿ ವಿದ್ಯಾನಗರಕ್ಕೆ ತಲುಪುತ್ತದೆ ಹಾಗೂ ಮೆಜೆಸ್ಟಿಕ್ ನಿಂದ ಬಸ್ ಸಂಖ್ಯೆ 298ಎಂ ವಿದ್ಯಾನಗರ ಕ್ರಾಸ್ ಗೆ ತಲುಪುತ್ತದೆ.

ಆಯ್ಕೆ ಪ್ರಕ್ರಿಯೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು/ಸಹಾಯಕ ನಿರ್ದೇಶಕರು/ತರಬೇತುದಾರರಿಂದ ಪಡೆದುಕೊಳ್ಳಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)