ನನಗೆ ಮಗುವಿದೆ, ದಯವಿಟ್ಟು ಗುಂಡು ಹಾರಿಸಬೇಡಿ ಅಂಗಲಾಚಿದರೂ ಗುಂಡು ಹೊಡೆದೇ ಬಿಟ್ಟರು...!

varthajala
0

 




ಬೆಂಗಳೂರು: 3 ವರ್ಷದ ಮಗುವಿದೆ ನಮ್ಮನ್ನು ಬಿಟ್ಟುಬಿಡಿ ಎಂದು ಅಂಗಲಾಚಿದರೂ ಕಿವಿಗೊಡದ ಉಗ್ರರು, ನಾವಿಲ್ಲಿ ಕಷ್ಟದಲ್ಲಿದ್ದೇವೆ. ನೀವು ಹೇಗೆ ಸಂಭ್ರಸಲು ಬಿಡುತ್ತೇವೆಂದು ಪತಿಗೆ ಗುಂಡು ಹೊಡೆದೇ ಬಿಟ್ಟರು ಎಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಭರತ್ ಅವರ ಪತ್ನಿ ಡಾ. ಸುಜಾತಾ ಅವರು ಕಣ್ಣೀರಿಟ್ಟಿದ್ದಾರೆ.

ಏಪ್ರಿಲ್ 18 ರಂದು ಕುಟುಂಬವು ಬೆಂಗಳೂರಿನಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿತ್ತು. ಭಯೋತ್ಪಾದಕ ದಾಳಿಯ ದಿನವನ್ನು ಸುಜಾತಾ ಅವರು ಸ್ಮರಿಸಿದ್ದು, ಪತಿಯ ನೆನೆದು ಕಣ್ಣೀರಿಟ್ಟಿದ್ದಾರೆ.

ನಾವು ಮಂಗಳವಾರ ಬೆಳಿಗ್ಗೆ ಪಹಲ್ಗಾಮ್‌ಗೆ ಹೋಗಿದ್ದೆವು. ಅಲ್ಲಿಂದ ನಾವು ಪೈನ್ ಮರಗಳಿಂದ ಆವೃತವಾದ ಬೈಸರನ್ ಎಂಬ ದೊಡ್ಡ ಹುಲ್ಲುಗಾವಲು ತಲುಪಿದೆವು. ಅದು ಮಿನಿ ಸ್ವಿಟ್ಜರ್‌ಲ್ಯಾಂಡ್‌ನಂತೆ ಕಾಣುತ್ತಿತ್ತು. ಪ್ರವಾಸಿಗರು ಸಾಂಪ್ರದಾಯಿಕ ಕಾಶ್ಮೀರಿ ಉಡುಪನ್ನು ಧರಿಸಿ ಫೋಟೋಗಳನ್ನು ತೆಗೆದುಕೊಳ್ಳಲು ಹಲವಾರು ಟೆಂಟ್ ಗಳಿದ್ದವು. ಮಧ್ಯಾಹ್ನ 1.30 ಆಗಿದ್ದರಿಂದ ಹಸಿವಾಗಿತ್ತು. ಹೀಗಾಗಿ ಹಿಂತಿರುಗಲು ನಿರ್ಧರಿಸಿದ್ದೆವು. ಈ ವಏಳೆ ಇದ್ದಕ್ಕಿದ್ದಂತೆ ಗುಂಡಿನ ಮೊರೆತದ ಶಬ್ಧ ಕೇಳಿಸಲು ಆರಂಬವಾಯಿತು. ಮೊದಲಿಗೆ ಪಟಾಕಿ ಶಬ್ಧವಿರಬೇಕು, ಕಾಡು ಪ್ರಾಣಿಗಳ ಹೆದರಿಸಲು ಸಿಡಿಸುತ್ತಿರಬಹುದು ಎಂದೇ ಎಲ್ಲರೂ ಭಾವಿಸಿದ್ದೆವು. ಆದರೆ, ಶಬ್ಧ ತೀವ್ರಗೊಳ್ಳುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬಳಿಕ ದಾಳಿ ನಡೆಸಲಾಗಿದೆ ಎಂಬುದು ನಮಗೆ ತಿಳಿಯಿತು. ಅಡಗಿಕೊಳ್ಳಲು ಟೆಂಟ್ ಕಡೆಗೆ ಓಡಿದೆವು.

ನಮ್ಮಿಂದ ಸುಮಾರು 500 ಮೀಟರ್ ದೂರದಲ್ಲಿ ಮತ್ತೊಂದು ಜೋಡಿಯಿತ್ತು. ಅಲ್ಲಿ ಒಬ್ಬ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿದರು. ಕೆಲವು ಕ್ಷಣಗಳ ನಂತರ ಓರ್ವ ಭಯೋತ್ಪಾದಕ ನನ್ನ ಗಂಡನ ಹಿಂದೆ ನಿಂತನು. ಭರತ್ ನನಗೆ 'ಚಿಂತಿಸಬೇಡಿ. ಶಾಂತವಾಗಿರಿ ಎಂದು ಹೇಳುತ್ತಲೇ ಇದ್ದರು. ಅವರು ನಮ್ಮನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದರು.

ನನಗೆ ಮಗುವಿದೆ, ದಯವಿಟ್ಟು ಗುಂಡು ಹಾರಿಸಬೇಡಿ' ಎಂದು ಹೇಳಿದರು. ನಮ್ಮ ಮಗನನ್ನು ಸಹ ತೋರಿಸಿದನರು. ಆದರೆ, ಭಯೋತ್ಪಾದಕ ಭರತ್ ತಲೆಗೆ ಎರಡು ಬಾರಿ ಗುಂಡು ಹಾರಿಸಿದ. ನನ್ನ ಪತಿ ನಮ್ಮ ಕಣ್ಣ ಮುಂದೆಯೇ ನೆಲಕ್ಕುರುಳಿದರು. ನಾವಿಲ್ಲಿ ಕಷ್ಟದಲ್ಲಿರುವಾಗ ನೀವು ಹೇಗೆ ಸಂಭ್ರಮಿಸುತ್ತೀರಿ? ನೀವು ಇಲ್ಲಿಗೆ ಆನಂದಿಸಲು ಬಂದಿದ್ದೀರಿ ಎಂದು ಭಯೋತ್ಪಾದಕ ಹೇಳಿದ್ದು ನನಗೆ ಕೇಳಿಸಿತು ಎಂದು ಸುಜಾತಾ ಅವರು ಹೇಳಿದ್ದಾರೆ.

ವು ಎಲ್ಲಿಂದ ಬಂದವರು ಅಥವಾ ಯಾವ ಧರ್ಮಕ್ಕೆ ಸೇರಿದವರು ಎಂದು ಭಯೋತ್ಪಾದಕ ಕೇಳಲಿಲ್ಲ. ಅವನು ನನ್ನ ಗಂಡನಿಗೆ ಗುಂಡು ಹಾರಿಸಿದನು. ಪತಿ ನೆಲಕ್ಕುರುಳುತ್ತಿದ್ದಂತೆಯೇ ಮಗನನ್ನು ಉಳಿಸಿಕೊಳ್ಳಲು ಪತಿಯ ಜೇಬಿನಲ್ಲಿದ್ದ ದಾಖಲೆಗಳು ಮತ್ತು ಮೊಬೈಲ್ ಫೋನ್ ತೆಗೆದುಕೊಂಡು ಓಡಿಹೋದೆ. ನಮ್ಮ ಸುತ್ತಲೂ ಗುಂಡಿನ ಮೊರೆತದ ಶಬ್ಧ ಕೇಳಿಸುತ್ತಲೇ ಇತ್ತು. ಎಲ್ಲಿ ನೋಡಿದರೂ ಶವಗಳು ಬಿದ್ದಿರುವುದು ಕಂಡು ಬರುತ್ತಿತ್ತು. ನಾವು ಮೂವರು ಭಯೋತ್ಪಾದಕರನ್ನು ನೋಡಿದ್ದೇನೆ. ಪಹಲ್ಗಾಮ್ ಪಟ್ಟಣದಲ್ಲಿ ಭಾರೀ ಭದ್ರತೆ ಇತ್ತು, ಆದರೆ ಬೆಟ್ಟದ ತುದಿಯಲ್ಲಿರುವ ಬೈಸರನ್‌ನಲ್ಲಿ ಯಾವುದೇ ಭದ್ರತೆ ಇರಲಿಲ್ಲ ಎಂದು ತಿಳಿಸಿದ್ದಾರೆ

Post a Comment

0Comments

Post a Comment (0)